ಬಿಜೆಪಿಯಿಂದ ಎಂಟಿಬಿ ನಾಗರಾಜ್ ಅಪಹರಣ: ಕಾಂಗ್ರೆಸ್ ಗಂಭೀರ ಆರೋಪ
ಎಂಟಿಬಿ ನಾಗರಾಜ್
ಬೆಂಗಳೂರು, ಜು. 14: ‘ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಅಪಹರಿಸಿದ್ದಾರೆ’ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ತುಘಲಕ್ ನರೇಂದ್ರ ಮೋದಿಯವರೇ, ಈ ದೇಶದ ಆತ್ಮವಾದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಿಮ್ಮ ಆಪರೇಷನ್ ಕಮಲ ಕೊಲೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಸಚಿವ ಎಂಟಿಬಿ ನಾಗರಾಜ್ ಅವರು ವಿಶೇಷ ವಿಮಾನದ ಮೂಲಕ ಮುಂಬೈಗೆ ತೆರಳುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ಹಣ ಮತ್ತು ಮಂತ್ರಿಗಿರಿಯ ಆಮಿಷ, ಒತ್ತಡ, ಬೆದರಿಕೆ ಮೂಲಕ ನಿಮ್ಮ ಆಪರೇಷನ್ ಕಮಲದ ಸಂಚು ಬಯಲಾಗಿದೆ ಎಂದು ಟೀಕಿಸಲಾಗಿದೆ.
Next Story