ರೋಷನ್ ಬೇಗ್ ತಲೆಮರೆಸಿಕೊಳ್ಳಲು ಬಿಜೆಪಿ ಸಹಾಯ: ಕುಮಾರಸ್ವಾಮಿ ಆರೋಪ
ಐಎಂಎ ಬಹುಕೋಟಿ ರೂ. ವಂಚನೆ ಹಗರಣ
ಬೆಂಗಳೂರು, ಜು.16: ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಶಿವಾಜಿ ನಗರ ಶಾಸಕ ರೋಷನ್ ಬೇಗ್ ಅವರಿಗೆ ತಲೆಮರೆಸಿಕೊಳ್ಳಲು ಯತ್ನಕ್ಕೆ ಬಿಜೆಪಿ ನಾಯಕರು ಸಹಾಯ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ರೋಷನ್ ಬೇಗ್ ಬೆಂಗಳೂರು ಬಿಟ್ಟು ತೆರಳಲು ಪ್ರಯತ್ನಿಸಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಅವರ ಆಪ್ತ ಸಂತೋಷ್ ಹಾಗೂ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಬೇಗ್ ಜೊತೆಗಿದ್ದರು. ಎಸ್ಐಟಿ ಅಧಿಕಾರಿಗಳನ್ನು ನೋಡಿದ
ಕೂಡಲೇ ಬಿಎಸ್ವೈ ಆಪ್ತ ಸಂತೋಷ್ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ. ಕೋಟ್ಯಂತರ ರೂ. ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ತಲೆಮರೆಸಿಕೊಳ್ಳಲು ಸಹಾಯ ಮಾಡುವ ಮೂಲಕ ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ. ಈ ಮೂಲಕ ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮುಖಂಡರು ಪ್ರಯತ್ನಿಸಿರುವುದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
Today SIT probing the #IMA case detained @rroshanbaig for questioning at the BIAL airport while he was trying leave along with @BSYBJP's PA Santosh on a chartered flight to Mumbai. I was told that on seeing the SIT, Santhosh ran away while the team apprehended Mr. Baig. 1/2 pic.twitter.com/MmyH4CyVfP
— H D Kumaraswamy (@hd_kumaraswamy) July 15, 2019
BJP's Yogeshwar was present at the time there.Its a shame that @BJP4Karnataka is helping a former minister escape, who is facing a probe in the #IMA case. This clearly shows #BJP' s direct involvement in destabilizing the govt through horse trading.2/2@INCIndia @INCKarnataka
— H D Kumaraswamy (@hd_kumaraswamy) July 16, 2019