ಕನ್ನಡದಲ್ಲಿಯೇ ವಿಧೇಯಕಗಳ ಮಂಡಿಸಲು ಸುತ್ತೋಲೆ
ಬೆಂಗಳೂರು, ಜು.17: ಸಚಿವ ಸಂಪುಟದ ಅನುಮೋದನೆ ಕೋರಿ ಮಂಡಿಸಲಾಗುತ್ತಿರುವ ಕರಡು ವಿಧೇಯಕಗಳು ಅಥವಾ ನಿಯಮಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಸಚಿವ ಸಂಪುಟದ ಟಿಪ್ಪಣಿಗಳನ್ನು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಂಡಿಸುತ್ತಿರುವುದು ಸರಿಯಷ್ಟೇ. ಆದರೆ, ಸಂಪುಟದ ಟಿಪ್ಪಣಿಗೆ ಲಗತ್ತಿಸಿ ಅನುಮೋದನೆ ಕೋರಿ ವಿವಿಧ ಇಲಾಖೆಗಳಿಂದ ಮಂಡಿಸುತ್ತಿರುವ ಕರಡು ವಿಧೇಯಕ ಅಥವಾ ನಿಯಮಗಳು ಇಂಗ್ಲಿಷ್ನಲ್ಲಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಕ್ಷೇಪಣೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
Next Story