ವಿಶ್ವಾಸಮತಕ್ಕೆ ಕ್ಷಣಗಣನೆ: ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು, ಜು.18: ಇಂದು ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಧಾನಸೌಧ ಎಲ್ಲಾ ದ್ವಾರಗಳಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್ಪಿ ತುಕಡಿ, 21 ಸಿಎಆರ್ ತುಕಡಿ ನಿಯೋಜನೆ,
ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ವಾಟರ್ ಜೆಟ್ ನಿಯೋಜನೆ ಮಾಡಲಾಗಿದೆ.
ಈ ನಡುವೆ ವಿಧಾನಸೌಧ ಸುತ್ತ ಎರಡು ಕಿ.ಮೀ. ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧ ಹೇರಲಾಗಿದೆ.
Next Story