ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಆರೋಪ
ವಿಲ್ಸನ್ ಗಾರ್ಡನ್ ನಲ್ಲಿ ಉದ್ರಿಕ್ತ ವಾತಾವರಣ
ಬೆಂಗಳೂರು, ಜು.19: ಖಾಸಗಿ ಆಸ್ಪತ್ರೆಯ ವೈದ್ಯರಿಂದ ಯುವಕನೋರ್ವ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತನ ಕುಟುಂಬದ ಸದಸ್ಯರು ಪ್ರತಿಭಟನೆ ನಡೆಸಿದ ಕಾರಣ ವಿಲ್ಸನ್ ಗಾರ್ಡ್ನ ಮುಖ್ಯರಸ್ತೆ ವ್ಯಾಪ್ತಿ ಎದುರು ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು.
ಸಿದ್ಧಗುಂಟೆ ಪಾಳ್ಯದ ನಿವಾಸಿ ಗೌತಮ್ ಗಿರೀಶ್(27) ಮೃತ ಯುವಕ ಎಂದು ತಿಳಿದುಬಂದಿದೆ.
ಹೃದಯಾಘಾತ ಸಂಭವಿಸಿದ ಕಾರಣ ಗಿರೀಶ್ ಅವರಿಗೆ ವಿಲ್ಸನ್ಗಾರ್ಡ್ನ ಅಗಡಿ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ವೈದ್ಯರ ನಿರ್ಲಕ್ಷ್ಯ ಹಾಗೂ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡದ ಕಾರಣ ಆತ ಮೃತಪಟ್ಟಿದ್ದಾನೆಂದು ಆರೋಪಿಸಿ ಶುಕ್ರವಾರ ಆಸ್ಪತ್ರೆ ಮುಂಭಾಗ ಜಮಾಯಿಸಿ, ಬೃಹತ್ ಪ್ರತಿಭಟನೆ ನಡೆಸಿದರು.
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಗಿರೀಶ್ 10 ವರ್ಷದಿಂದ ಕನ್ನಡ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಪ್ರತಿಭಟನೆಯಿಂದಾಗಿ ಈ ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ನಿಗೂಢ ಸಾವು ಪ್ರಕರಣ ದಾಖಲಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ವೈದ್ಯರು ಮತ್ತು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.