ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಬಿಜೆಪಿ ನಾಯಕರೂ ಇದ್ದಾರೆ: ಅರವಿಂದ ಲಿಂಬಾವಳಿ
ಬೆಂಗಳೂರು, ಜು.22: ಮೈತ್ರಿ ಸರಕಾರ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ. ಈ ಷಡ್ಯಂತ್ರದ ಭಾಗವಾಗಿ ಬಿಜೆಪಿಯ ಕೆಲ ನಾಯಕರು ಇದ್ದಾರೆ. ನನ್ನ ವಿರುದ್ಧ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಸಮಯ, ಸಂದರ್ಭ ಬಂದಾಗ ಹೇಳುತ್ತೇನೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಸಚಿವರೊಬ್ಬರು ನನಗೆ ಕರೆ ಮಾಡಿ ನಮಗೆ ಸಹಕರಿಸಿ, ನಿಮಗೂ ಸಹಕರಿಸುತ್ತೇವೆಂದು ಹೇಳಿದ್ದಾರೆ. ತನ್ನ ವಿರುದ್ಧ ದೊಡ್ಡಮಟ್ಟದ ಷಡ್ಯಂತ್ರ ನಡೆದಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದರು.
ವಿಪ್ಗೆ ಸಂಬಂಧಿಸಿದ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಾಳೆಗೆ ಮುಂದೂಡಿದೆ. ಇದನ್ನೆ ಬಳಸಿಕೊಂಡು ಮೈತ್ರಿ ಸರಕಾರ ವಿಶ್ವಾಸಮತ ಯಾಚನೆಯನ್ನು ಮುಂದೂಡುವಂತಹ ತಂತ್ರಗಳನ್ನು ಎಣಿಯುತ್ತಿದೆ. ಇಂತಹ ವಾಮಮಾರ್ಗಗಳನ್ನು ಬಿಟ್ಟು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚಿಸಬೇಕು ಎಂದು ಅವರು ಹೇಳಿದರು.
Next Story