ಸಿಎಂ ಆಗಿ ಯಡಿಯೂರಪ್ಪ ಮಾತ್ರ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಬೆಂಗಳೂರು, ಜು.24: ಈ ಬಾರಿಯ ಸರಕಾರ ರಚನೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿರುವ ಬಿಜೆಪಿ ಮೊದಲಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ವಿಶ್ವಾಸ ಮತ ಯಾಚನೆಯ ಬಳಿಕ ಸಂಪುಟ ರಚನೆಗೆ ಕೈಹಾಕಲು ನಿರ್ಧರಿಸುವ ನಿರೀಕ್ಷೆಯಿದೆ.
ಇಂದು ದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಕೇಂದ್ರದಿಂದ ವೀಕ್ಷಕರೊಬ್ಬರು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಆ ಬಳಿಕ ಶಾಸಕಾಂಗ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಶಾಸಕರ ರಾಜೀನಾಮೆಯನ್ನು ಸ್ವೀಕರ್ ರಮೇಶ ಕುಮಾರ್ ಇನ್ನೂ ಅಂಗೀಕಾರ ಮಾಡಿಲ್ಲ. ‘‘ಅತೃಪ್ತ ಶಾಸಕರನ್ನು ಸಚಿವ ಸ್ಥಾನ ನೀಡುವ ಮೊದಲು ಸಾಕಷ್ಟು ಪ್ರಕ್ರಿಯೆ ನಡೆಯಲಿದೆ. ಕೇಂದ್ರ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ’’ ಎಂದು ಯಡಿಯೂರಪ್ಪ ಅವರ ಪುತ್ರ, ಸಂಸದ ಬಿಎಸ್ ರಾಘವೇಂದ್ರ ದಿಲ್ಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Next Story