ಶಾಸಕರ ರಾಜೀನಾಮೆ: ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಮುಖಂಡ ಸಭೆ
ಬೆಂಗಳೂರು, ಜು. 25: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆ ಕರೆದಿದ್ದಾರೆ.
ಜು.27ರ ಬೆಳಗ್ಗೆ 11ಗಂಟೆಗೆ ರಾಜರಾಜೇಶ್ವರಿನಗರ ಕ್ಷೇತ್ರ, ಮಧ್ಯಾಹ್ನ 12ಕ್ಕೆ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ಹಾಗೂ ಜು.28ರ ಬೆಳಗ್ಗೆ 11ಕ್ಕೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ಹಾಗೂ ಮಧ್ಯಾಹ್ನ 12ಕ್ಕೆ ಯಶವಂತಪುರ ಕ್ಷೇತ್ರದ ಜೆಡಿಎಸ್ ಮುಖಂಡರ ಸಭೆ ಕರೆದಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಗೋಪಾಲಯ್ಯ, ಯಶವಂತಪುರ- ಸೋಮಶೇಖರ್, ರಾಜರಾಜೇಶ್ವರಿ ನಗರ- ಮುನಿರತ್ನ ಹಾಗೂ ಕೆ.ಆರ್.ಪುರ-ಬೈರತಿ ಬಸವರಾಜು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
Next Story