ಐಎಂಎ ವಂಚನೆ ಪ್ರಕರಣ: ಆ.16 ರಂದು ಮನ್ಸೂರ್ ಖಾನ್ ಕೋರ್ಟ್ ಗೆ ಹಾಜರು
ಬೆಂಗಳೂರು, ಆ.16: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಸಿಟ್ ವಶದಲ್ಲಿರುವ ಪ್ರಮುಖ ಆರೋಪಿ ಮನ್ಸೂರ್ನನ್ನು ನಾಳೆ(ಆ.16) ಕೋರ್ಟಿಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಮನ್ಸೂರ್ ಖಾನ್ ಬಂಧನದ ಬಳಿಕ, ಜಾರಿ ನಿರ್ದೇಶನಾಲಯ ಮನ್ಸೂರ್ನನ್ನು ವಶಕ್ಕೆ ಪಡೆದುಕೊಂಡಿತ್ತು. ಇದಾದ ಬಳಿಕ ಸಿಟ್, 14 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆ ನಾಳೆ ಕೋರ್ಟಿಗೆ ಹಾಜರುಪಡಿಸಲಿದೆ ಎಂದು ಹೇಳಲಾಗುತ್ತಿದೆ.
ವಿಚಾರಣೆಯಲ್ಲಿ ಹೊಸದಿಲ್ಲಿ, ಉತ್ತರ ಪ್ರದೇಶ ಹಾಗೂ ಹರಿಯಾಣ ಸೇರಿ ಹೊರ ರಾಜ್ಯಗಳಲ್ಲೂ ಆಸ್ತಿ ಖರೀದಿ ಮಾಡಿರುವ ಬಗ್ಗೆ ಮನ್ಸೂರ್ ಖಾನ್ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಇದರ ಅನ್ವಯ ತನಿಖಾಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story