ಸ್ವಾತಂತ್ರ ಹೋರಾಟಗಾರರ ವಿಚಾರಧಾರೆಗೆ ಬದ್ಧ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಆ.15: ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಚಿಂತನೆ ಹಾಗೂ ವಿಚಾರಧಾರೆಗಳಿಗೆ ನಾವು ಬದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಗುರುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ 73ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ದೇಶದ ಜನತೆ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇಂದಿನ ಪೀಳಿಗೆ ಮಹಾತ್ಮ ಗಾಂಧೀಜಿಯನ್ನು ಸ್ಮರಣೆ ಮಾಡಬೇಕು. ಅಲ್ಲದೆ ಇಂತಹ ವಿಶೇಷ ಸಂದರ್ಭಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಾನಪದ ಗಾಯನ, ಬಳುಕಾಟ, ಪೂಜಾಕುಣಿತ, ಚಿಟ್ಟಿಮೇಳ, ನಗಾರಿ ವಾದ್ಯ, ಕರಡಿ ಮಜಲು ಹಾಗೂ ವೀರಭದ್ರಕುಣಿತ ಪ್ರದರ್ಶನಗಳು ಗಮನ ಸೆಳೆದವು.
Next Story