ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋಟಿ ರೂ. ದೇಣಿಗೆ
ಬೆಂಗಳೂರು, ಆ.19: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ದೇಣಿಗೆ ನೀಡಿದರು.
ಈ ಸಂದರ್ಭ ಶಾಸಕರಾದ ಆರ್.ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಮತ್ತು ಧರ್ಮಸ್ಥಳದ ಡಿ.ಸುರೇಂದ್ರಕುಮಾರ್ ಅವರು ಉಪಸ್ಥಿತರಿದ್ದರು.
Next Story