ಹಳೇ ದ್ವೇಷ ಹಿನ್ನೆಲೆ: ಬೆಂಗಳೂರಿನಲ್ಲಿ ರೌಡಿ ಸೇರಿ ಇಬ್ಬರ ಹತ್ಯೆ
ಬೆಂಗಳೂರು, ಆ.26: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಹಾಗೂ ಆತನ ಸ್ನೇಹಿತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಲಘಟ್ಟಪುರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿರುವ ಮಂಜುನಾಥ್(27), ಈತನ ಸ್ನೇಹಿತ, ಬಿಟಿಎಂ ನಿವಾಸಿ ವರುಣ್(24) ಎಂಬುವರು ಕೊಲೆಯಾಗಿರುವ ದುರ್ದೈವಿಗಳು ಎಂದು ತಿಳಿದುಬಂದಿದೆ.
ರವಿವಾರ ರಾತ್ರಿ ಮಂಜುನಾಥ್ ಮತ್ತು ವರುಣ್, ಜೆಪಿ ನಗರ, 2ನೆ ಬ್ಲಾಕ್, 24ನೆ ಕ್ರಾಸ್ ರಿಂಗ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಕಾರಿನಲ್ಲಿ ಇವರನ್ನು ಹಿಂಬಾಲಿಸಿ ಬೈಕ್ಗೆ ಢಿಕ್ಕಿ ಹೊಡೆಯಲು ಯತ್ನಿಸಿದ್ದಾರೆ.
ಇದನ್ನು ಗಮನಿಸಿದ ಇವರು, ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಹೋದರೂ, ಬೆನ್ನಟ್ಟಿಕೊಂಡು ಹೋಗಿ ಬೈಕ್ಗೆ ಢಿಕ್ಕಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಮಂಜುನಾಥ್ ತಪ್ಪಿಸಿಕೊಳ್ಳಲು ಹೋದಾಗ, ಸ್ಥಳದಲ್ಲಿದ್ದ ವರುಣ್ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಬಳಿಕ, ಮಂಜುನಾಥ್ನನ್ನು ಬೆನ್ನಟ್ಟಿ ನಂದಿನಿ ಹೊಟೇಲ್ ಜಂಕ್ಷನ್ ಬಳಿ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮನ ಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಜೆಪಿ ನಗರ ಠಾಣೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.