ಸಿನೆಮಾ ಅವಕಾಶದ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ: ಸಂಗೀತ ನಿರ್ದೇಶಕನ ವಿರುದ್ಧ ದೂರು
ಬೆಂಗಳೂರು, ಆ.28: ಸಿನಿಮಾ ಹೆಸರಿನಲ್ಲಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಸಂಗೀತ ನಿರ್ದೇಶಕನ ವಿರುದ್ಧ ಸಂತ್ರಸ್ತೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಸಂಗೀತ ನಿರ್ದೇಶಕ ಮುರಳೀಧರ್ ರಾವ್ ಎಂಬುವರ ವಿರುದ್ಧ ಆರೋಪ ಕೇಳಿ ಬಂದಿದ್ದು, ಕುಮಾರಸ್ವಾಮಿ ಲೇಔಟ್ ನಿವಾಸಿಯಾಗಿರುವ ಮುರಳೀಧರ್ ರಾವ್ ಚಿಟ್ಟೆ ಆಲ್ಬಮ್ ನಿಂದ ಹೆಸರು ಪಡೆದಿದ್ದ ಎನ್ನಲಾಗಿದೆ.
ಸಿನಿಮಾ ಮತ್ತು ಜಾಹೀರಾತುಗಳಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ಸಂತ್ರಸ್ತೆಯನ್ನು ನಂಬಿಸಿ, ಬೆತ್ತಲೆ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಈ ಕುರಿತು ಎಫ್ಐಆರ್ ದಾಖಲಿಸಿಕೊಂಡಿರುವ ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Next Story