ಮಾರಕಾಸ್ತ್ರಗಳಿಂದ ಕೊಚ್ಚಿ ಪತ್ನಿಯ ಕೊಲೆಗೈದ ಪತಿ
ಬೆಂಗಳೂರು, ಆ.30: ಮಾರಕಾಸ್ತ್ರಗಳಿಂದ ಕೊಚ್ಚಿ ಪತ್ನಿಯನ್ನು ಪತಿಯೇ ಕೊಲೆಗೈದಿರುವ ಘಟನೆ ಇಲ್ಲಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಟಿಬಿಸಂದ್ರದ ಪ್ರಿಯಾಂಕ(29) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದ್ದು, ಕೃತ್ಯವೆಸಗಿದ ಜಗದೀಶ್(24)ನನ್ನು ಪೊಲೀಸರು ಬಂಧಿಸಿದ್ದಾರೆ.
ಅನ್ಯೋನ್ಯವಾಗಿದ್ದ ಪ್ರಿಯಾಂಕ, ಜಗದೀಶ್ ದಂಪತಿ ನಡುವೆ ಇತ್ತೀಚೆಗೆ ಜಗಳವುಂಟಾಗಿತ್ತು. ನಡತೆ ಸರಿಯಿಲ್ಲ ಎಂದು ಆ.27 ರಂದು ಪ್ರಿಯಾಂಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರಿಯಾಂಕಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲಿಸಿರುವ ವಿದ್ಯಾರಣ್ಯಪುರ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
Next Story