ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ
ಬೆಂಗಳೂರು, ಸೆ.5: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಭಾಗವಹಿಸಿ ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಇಲಾಖೆ ಆಯುಕ್ತರಾದ ಎನ್. ಮಂಜುಳಾ, ವಿಧಾನ ಪರಿಷತ್ ಉಪ ಸಭಾಪತಿ ಪುಟ್ಟಣ್ಣ, ಪ್ರೊ. ಕೃಷ್ಣ ಭಟ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್ ಆರ್. ವಿಶ್ವನಾಥ್, ಶಾಸಕರಾದ ಸೋಮಶೇಖರ ರೆಡ್ಡಿ ಉಪಸ್ಥಿತರಿದ್ದರು.