ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಸ್ಸಾರ್ಟಿಸಿಯಿಂದ 4.74 ಕೋಟಿ ರೂ.ಚೆಕ್ ಹಸ್ತಾಂತರ
ಬೆಂಗಳೂರು, ಸೆ. 11: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿ ಮತ್ತು ನೌಕರರ ಒಂದು ದಿನದ ವೇತನ ಒಟ್ಟು 4.74 ಕೋಟಿ ರೂ.ಗಳನ್ನು ‘ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿ’ಗೆ ಹಸ್ತಾಂತರಿಸಲಾಯಿತು.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಚೆಕ್ ಅನ್ನು ಸಲ್ಲಿಸಿದರು.
ಕೆಎಸ್ಸಾರ್ಟಿಸಿಯ 3.07 ಕೋಟಿ ರೂ. ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ 1.66 ಕೋಟಿ ರೂ.ಗಳನ್ನು ನೆರೆ ಸಂತ್ರಸ್ತರ ನೆರವಿಗಾಗಿ ನೀಡಲಾಯಿತು. ಈ ವೇಳೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸೀಮ್, ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿ ಎಚ್.ಕೆ.ರಮಾಮಣಿ ಉಪಸ್ಥಿತರಿದ್ದರು.
Next Story