ಸಿಎಂ ಯಡಿಯೂರಪ್ಪ ವಿರುದ್ಧ ಅನರ್ಹ ಶಾಸಕರು ಗರಂ
ಬೆಂಗಳೂರು, ಸೆ.13: ಕಾನೂನು ಹೋರಾಟಕ್ಕೆ ಬಿಜೆಪಿಯಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿ ಅನರ್ಹ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅನರ್ಹ ಪ್ರಕರಣಕ್ಕೆ ಒಂದೂವರೆ ತಿಂಗಳೇ ಕಳೆದರೂ ನಮ್ಮನ್ನು ಕೇಳೋರೇ ಇಲ್ಲದಂತಾಗಿದೆ. ನಮ್ಮ ಅರ್ಜಿ ಸುಪ್ರೀಂ ಕೋಟ್ರ್ನಲ್ಲೂ ವಿಚಾರಣೆಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಿರುವ ಅನರ್ಹ ಶಾಸಕರು ತಮ್ಮ ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲು ಇಂದು ಮಧ್ಯಾಹ್ನ ಡಾ.ಸುಧಾಕರ್ ಅವರ ನಿವಾಸದಲ್ಲಿ ಸಭೆ ಸೇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Next Story