ನಾಳೆ ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ
ಬೆಂಗಳೂರು, ಸೆ.16: ಸ್ಪೀಕರ್ ತೀರ್ಮಾನವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.17ರಂದು ನಡೆಯಲಿದೆ.
ಆರ್.ಶಂಕರ್ ಸೇರಿ ಕಾಂಗ್ರೆಸ್ ಮತ್ತು ಜೆಡಿಎಸ್ನ 17 ಮಂದಿ ಮಾಜಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎನ್.ವಿ.ರಮಣ, ಮೋಹನ ಶಾಂತನಗೌಡರ್ ಹಾಗೂ ಅಜಯ್ ರಸ್ತೋಗಿ ಅವರಿರುವ ನ್ಯಾಯಪೀಠದಲ್ಲಿ ನಡೆಯಲಿದೆ.
ಸ್ಪೀಕರ್ ತೀರ್ಮಾನವನ್ನು ಪ್ರಶ್ನಿಸಿ ರಮೇಶ್ ಜಾರಕಿಹೊಳಿ ಮತ್ತು ಇತರರು, ಕೆ.ಸುಧಾಕರ್, ಪ್ರತಾಪ್ಗೌಡ ಪಾಟೀಲ್ ಮತ್ತು ಇತರರು, ಎ.ಎಚ್.ವಿಶ್ವನಾಥ್ ಮತ್ತು ಇತರರು, ಆರ್.ಶಂಕರ್ ಹಾಗೂ ಆನಂದ್ ಸಿಂಗ್ ಪ್ರತ್ಯೇಕವಾಗಿ ಸುಪ್ರೀಂಕೋರ್ಟ್ಗೆ ಅರ್ಜಿಗಳನ್ನು ಸಲ್ಲಿಸಿದ್ದು, ಇವುಗಳೆಲ್ಲಾ ಮಂಗಳವಾರ ವಿಚಾರಣೆಗೆ ಬರಲಿವೆ.
Next Story