ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಜಹೇಶ್ ಜೆಡ್ಸಾನನ್ನು ಬಂಧಿಸಿ: ದಸಂಸ
ಬೆಂಗಳೂರು, ಸೆ.20: ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ರಿಯಲ್ ಎಸ್ಟೇಟ್ ಉದ್ಯಮಿ ಜಹೇಶ್ ಜೆಡ್ಸಾನನ್ನು ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟಿಸಿದೆ.
ಶುಕ್ರವಾರ ರಾಜಾಜಿನಗರದ ಬಿಂದು ಡೆವಲಪರ್ಸ್ ಆ್ಯಂಡ್ ಪ್ರಮೋಟರ್ಸ್ ಕಚೇರಿ ಮುಂದೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಸಂಸ್ಥಾಪಕ ಡಾ.ಎನ್.ಮೂರ್ತಿ, ನಾಗರಭಾವಿ ಸರ್ವೇ ನಂ. 87ರಲ್ಲಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಚೇರಿ ಮತ್ತು ಸುತ್ತಲಿನ 1 ಎಕರೆ ಜಾಗ ಕಬಳಿಸಲು ಎಸ್ಟೇಟ್ ಉದ್ಯಮಿ ಜಹೇಶ್ ಜೆಡ್ಸಾ ಮತ್ತು ಆತನ ಸಹಚರರು ಕಚೇರಿ ಮುಂದಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ ಎಂದರು.
ಇನ್ನು, ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತುಮಕೂರು ಜಿಲ್ಲಾಧ್ಯಕ್ಷ ಪಿ.ರಾಮಯ್ಯ, ಬೆಂಗಳೂರು ದಕ್ಷಿಣ ತಾಲೂಕು ಅಧ್ಯಕ್ಷ ವೈ.ರಮೇಶ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಜಿ.ಸುಬ್ರಹ್ಮಣಿ, ಸಮಿತಿಯ ರಾಜ್ಯ ನಿರ್ದೇಶಕ ಎಂ.ಎಸ್.ಗಂಗು, ಬೈಲಹೊನ್ನಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.