ಫೋನ್ ಕದ್ದಾಲಿಕೆ ಪ್ರಕರಣ: ಯಾವುದೇ ನೋಟಿಸ್ ಬಂದಿಲ್ಲ- ಭಾಸ್ಕರ್ ರಾವ್
ಬೆಂಗಳೂರು, ಸೆ.28: ಭಾರೀ ಸಂಚಲನ ಮೂಡಿಸಿದ್ದ ಫೋನ್ ಕದ್ದಾಲಿಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ನನಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದರು.
ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಸಿಬಿಐ ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ನೀಡಿದರೆ, ಸಿಬಿಐ ತನಿಖಾಧಿಕಾರಿ ಎದುರು ಹಾಜರಾಗುತ್ತೇನೆ ಎಂದು ತಿಳಿಸಿದರು.
ಈ ಹಿಂದಿನ ಮೈತ್ರಿ ಸರಕಾರದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ಕಾಲಾವಧಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು ಆಯುಕ್ತರ ಹುದ್ದೆಗೆ ಲಾಬಿ ನಡೆಸಿದ್ದರು ಎನ್ನುವ ಗಂಭೀರ ಆರೋಪ ಕೇಳಿಬಂದಿತ್ತು. ಇದೇ ಕರೆಯನ್ನು ಸಿಸಿಬಿ ತಾಂತ್ರಿಕ ವಿಭಾಗದ ಅಧಿಕಾರಿ, ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಕದ್ದಾಲಿಕೆ ಮಾಡಿದ್ದರು ಎನ್ನಲಾಗಿದೆ.
Next Story