ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಕಾರ್ಪೋರೇಟರ್ ಬಿಡುಗಡೆ: ಬೆಂಬಲಿಗರಿಂದ ಭರ್ಜರಿ ಸ್ವಾಗತ !
ಬೆಂಗಳೂರು, ಅ.15: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಕಾರ್ಪೋರೇಟರ್ ಜೈಲಿನಿಂದ ಬಿಡುಗಡೆಯಾಗಿ ಬಂದ ವೇಳೆ ಅವರನ್ನು ಪಟಾಕಿ ಸಿಡಿಸಿ ಬೆಂಬಲಿಗರು ಭರ್ಜರಿಯಾಗಿ ಸ್ವಾಗತಿಸಿದ ಘಟನೆ ನಡೆದಿದೆ.
ಐಎಂಎ ಪ್ರಕರಣದಲ್ಲಿ ಬಂಧಿತನಾಗಿದ್ದ ನಾಮನಿರ್ದೇಶಿತ ಕಾರ್ಪೋರೇಟರ್ ಮುಜಾಹೀದ್ ಸೋಮವಾರ ಪರಪ್ಪನ ಆಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ ಒಂದರಂದು ಎಸ್.ಐ.ಟಿಯಿಂದ ಬಂಧಿಸಲ್ಪಟ್ಟಿದ್ದ ಮುಜಾಹೀದ್ ಗೆ ಮೂರು ತಿಂಗಳ ನಂತರ ಜಾಮೀನು ಸಿಕ್ಕಿತ್ತು.
ಸೋಮವಾರ ರಾತ್ರಿ ಅವರು ಜೈಲಿನಿಂದ ಬಿಡುಗಡೆಯಾಗಿ ಬಂದ ವೇಳೆ ಬೆಂಬಲಿಗರು ಹೂಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ಷೇರು ಸಂಗ್ರಹಿಸಿ ವಂಚಿಸಿರುವ ‘ಐಎಂಎ ಸಮೂಹ’ ಕಂಪನಿ ಮಾಲಕ ಮನ್ಸೂರ್ ಖಾನ್ ಪರಾರಿಯಾಗಲು ಸಹಾಯ ಮಾಡಿದ್ದ ಆರೋಪದಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಮನಿರ್ದೇಶಿತ ಸದಸ್ಯ ಸಯ್ಯದ್ ಮುಜಾಹೀದ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
Next Story