ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ: ಝಮೀರ್ ಅಹ್ಮದ್ ಸೋಮವಾರ ಆಸ್ಪತ್ರೆಯಿಂದ ಮನೆಗೆ
ಬೆಂಗಳೂರು, ಅ.20: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಝಮೀರ್ ಅಹ್ಮದ್ ಖಾನ್ ಅವರನ್ನು ಸೋಮವಾರ(ಅ.21) ಮನೆಗೆ ಕಳುಹಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಝಮೀರ್ ಅಹ್ಮದ್ ಖಾನ್ ಅವರಿಗೆ ಲಘು ಹೃದಯಾಘಾತಕ್ಕೆ ತುತ್ತಾಗಿದ್ದರು. ತಕ್ಷಣ ಕುಟುಂಬ ಸದಸ್ಯರು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ, ಸ್ಟಂಟ್ ಹಾಕಿರುವ ವೈದ್ಯರು, ಚಿಕಿತ್ಸೆ ಮುಂದುವರಿಸಿದ್ದಾರೆ. ಝಮೀರ್ ಅಹ್ಮದ್ ಖಾನ್ ಅವರಿಗೆ ಗಂಭೀರ ಸಮಸ್ಯೆ ಇಲ್ಲ. ಅವರು ಆರೋಗ್ಯವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಬರಲಿದ್ದಾರೆ ಎಂದು ಅವರು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಸೇರಿದಂತೆ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ ಅವರು ಆರೋಗ್ಯ ವಿಚಾರಿಸಿದರು.
Next Story