‘‘ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ವ, ಸಾರ್ವಕರ್ ಬಗ್ಗೆ ಮುಂದಿನ ಚುನಾವಣೆ ಕಾಲಕ್ಕೆ ಮಾತನಾಡೋಣ’’
ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಕಿವಿಮಾತು
ಬೆಂಗಳೂರು, ಅ.22: ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ವ, ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ. ಈಗ ತುರ್ತಾಗಿ ಆಗಬೇಕಿರುವುದು ನಿರುದ್ಯೋಗ ಸಮಸ್ಯೆಗೆ ಪರಿಹಾರ, ಬೆಲೆ ಏರಿಕೆಗೆ ಕಡಿವಾಣ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ರಕ್ಷಣೆ, ರೈತರ ಸಂಕಷ್ಟಗಳಿಗೆ, ನೆರೆ-ಬರಕ್ಕೆ ಪರಿಹಾರ. ಆದ್ದರಿಂದ ಈ ಬಗ್ಗೆ ಚರ್ಚಿಸೋಣ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘‘ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ, ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ. ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ.’’ ಎಂದು ಒತ್ತಾಯಿಸಿದ್ದಾರೆ.
ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ,
— Siddaramaiah (@siddaramaiah) October 22, 2019
ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ.
ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ.#DebateOnRealissues