ಅನರ್ಹ ಶಾಸಕರ ಬಗ್ಗೆ ಪ್ರತಿಕ್ರಿಯಿಸಲಾರೆ: ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್
ಬೆಂಗಳೂರು, ನ.10: ಈ ಹಿಂದೆ ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿಕೆ ನೀಡಿದ್ದ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು, ಇಂದು ಅನರ್ಹ ಶಾಸಕರ ವಿಚಾರ ಸುಪ್ರೀಂಕೋರ್ಟ್ನಲ್ಲಿ ಇರುವುದರಿಂದ ಆ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂಬ ಹೇಳಿಕೆ ನೀಡಿದ್ದಾರೆ.
ರವಿವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬುಧವಾರ ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಕುರಿತ ತೀರ್ಪು ಹೊರ ಬೀಳಲಿದೆ. ಹೀಗಾಗಿ, ಯಾವುದೇ ಪ್ರತಿಕ್ರಿಯೆ ನೀಡಲಾರೆ, ಅನರ್ಹರ ಬಗ್ಗೆ ಈ ಮೊದಲು ಎಲ್ಲಿಯೂ ತಾವು ಮಾತನಾಡಿಲ್ಲ ಎಂದು ಸಮರ್ಥಿಸಿಕೊಂಡರು.
ಅನರ್ಹ ಶಾಸಕರ ಸ್ಪರ್ಧೆಗೆ ನಮ್ಮ ಯಾವುದೇ ವಿರೋಧವಿಲ್ಲ. ಸುಪ್ರೀಂಕೋರ್ಟ್ನ ಆದೇಶವನ್ನು ಎಲ್ಲರೂ ಕಾದು ನೋಡಬೇಕಾಗ್ತುದೆ ಎಂದು ತಿಳಿಸಿದರು.
Next Story