ಕರ್ನಾಟಕ ಹೈಕೋರ್ಟ್: ಐವರು ನ್ಯಾಯಮೂರ್ತಿಗಳ ಪ್ರಮಾಣ ವಚನ
ಬೆಂಗಳೂರು, ನ.11: ಕರ್ನಾಟಕ ಹೈಕೋರ್ಟ್ಗೆ ಎನ್.ಎಸ್.ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್.ನಟರಾಜ್, ಹೇಮಂತ್ ಚಂದನಗೌಡರ್ ಹಾಗೂ ಪ್ರದೀಪ್ ಸಿಂಗ್ ಯೆರೂರು ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸೋಮವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ನ್ಯಾಯಮೂರ್ತಿಗಳಿಗೆ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು. ಈ ಐವರು ಹಂಗಾಮಿ ನ್ಯಾಯಮೂರ್ತಿಗಳು ಕರ್ನಾಟಕ ಹೈಕೋರ್ಟ್ ವಕೀಲ ವೃಂದದಿಂದ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹಾಜರಿದ್ದರು.
Next Story