ಕನಕ ಜಯಂತಿ ‘ರಜೆ ರದ್ದು ಇಲ್ಲ’: ಡಿಸಿಎಂ ಅಶ್ವಥ್ ನಾರಾಯಣ ಸ್ಪಷ್ಟಣೆ
ಬೆಂಗಳೂರು, ನ.12: ಕನಕದಾಸ ಜಯಂತಿ ಪ್ರಯುಕ್ತ ಇರುವ ರಜೆಯನ್ನು ಕರ್ನಾಟಕ ಸರಕಾರ ಹಿಂಪಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಕನಕದಾಸ ಜಯಂತಿ ಆಚರಣೆ ಮಾಡಲಾಗುವುದು. ಆ ದಿನ ಸರಕಾರಿ ರಜೆ ಇದೆ ಎಂದು ಸ್ಪಷ್ಟಪಡಿಸುವ ಮೂಲಕ ಈ ಸಂಬಂಧ ಸೃಷ್ಟಿಯಾಗಿದ್ದ ಗೊಂದಲಕ್ಕೆ ಡಾ.ಅಶ್ವಥ್ ನಾರಾಯಣ ತೆರೆ ಎಳೆದಿದ್ದಾರೆ.
ನ.15ರ ಶುಕ್ರವಾರ ಕನಕ ಜಯಂತಿ ಆಚರಣೆ ಮಾಡಲಾಗುವುದು. ರಜೆ ಬಗ್ಗೆ ಯಾವುದೇ ಖಾಸಗಿ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳು ಬೇರೆ ನಿರ್ಧಾರ ಕೈಗೊಂಡಿದ್ದರೆ, ಅದು ಆಯಾ ಸಂಸ್ಥೆಯ ನಿರ್ಧಾರವಾಗಿರುತ್ತದೆ. ಈ ಸಂಬಂಧ ಸರಕಾರ ಯಾವುದೇ ಆದೇಶ ಅಥವಾ ಸೂಚನೆ/ಆದೇಶ ಹೊರಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Next Story