ಬಿಜೆಪಿಗೆ ಬಂಡಾಯದ ಸಮಸ್ಯೆಯಿಲ್ಲ: ಡಿ.ವಿ.ಸದಾನಂದಗೌಡ
ಬೆಂಗಳೂರು, ನ.16: ಯಶವಂತಪುರ, ಮಹಾಲಕ್ಷ್ಮಿ ಲೇಔಟ್ ಹಾಗೂ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಸಮಸ್ಯೆಯಿಲ್ಲ. ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ಸಂಘಟನೆಯಲ್ಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಭಾರೀ ಬಹುಮತದಿಂದ ಜಯ ಗಳಿಸಲಿದ್ದಾರೆ. ಮಹಾಲಕ್ಷ್ಮಿ ಲೇಔಟ್ನಲ್ಲಿ ನಮ್ಮ ಅಭ್ಯರ್ಥಿ ಕೆ.ಗೋಪಾಲಯ್ಯ ಹಾಗೂ ಮಾಜಿ ಉಪ ಮೇಯರ್ ಹರೀಶ್ ಮಧ್ಯೆ ಯಾವುದೇ ಅಸಮಾಧಾನವಿಲ್ಲ ಎಂದರು.
ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಬಲಪಡಿಸುವುದೇ ನಮ್ಮ ಮುಂದಿರುವ ಪ್ರಮುಖ ಗುರಿ ಎಂದು ಸದಾನಂದಗೌಡ ಹೇಳಿದರು.
Next Story