ಡಾ.ಉಮರ್ ಬೀಜದಕಟ್ಟೆಯವರಿಗೆ 2019ರ ಮಾನವ ಸಂಪನ್ಮೂಲ ಅಭಿವೃದ್ಧಿ ಕ್ಷೇತ್ರದ ಹಿರಿಯ ಸಾಧಕ ಪ್ರಶಸ್ತಿ
ಬೆಂಗಳೂರು, ನ.17: ತೃತೀಯ ರಾಜ್ಯ ಮಟ್ಟದ ಮಾನವ ಸಂಪನ್ಮೂಲ ವೃತ್ತಿ ನಿರತ ಕನ್ನಡ ಸಮ್ಮೇಳನದಲ್ಲಿ ಡಾ.ಉಮರ್ ಬೀಜದಕಟ್ಟೆಯವರಿಗೆ 2019ರ ಮಾನವ ಸಂಪನ್ಮೂಲ ಅಭಿವೃದ್ಧಿ ಕ್ಷೇತ್ರದ ಹಿರಿಯ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶನಿವಾರ ನಡೆದ ಸಮ್ಮೆಳನದಲ್ಲಿ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರರು ಪ್ರಶಸ್ತಿ ಪ್ರದಾನ ಮಾಡಿದರು.
ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಇಲ್ಲಿನ ಫಾರ್ಮೆಡ್ ಗ್ರೂಪ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿರುವಡಾ.ಉಮರ್ ಬೀಜದಕಟ್ಟೆ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story