ಬಿಜೆಪಿಯ ಎನ್.ಆರ್.ರಮೇಶ್ ವಿರುದ್ಧ ಹಕ್ಕುಚ್ಯುತಿ: ಸ್ಪೀಕರ್ಗೆ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ಪತ್ರ
ಬೆಂಗಳೂರು, ನ. 18: ಬೆಂಗಳೂರು ನಗರ ಜಿಲ್ಲೆ ಬಿಜೆಪಿ ವಕ್ತಾರ ಎನ್.ರಮೇಶ್ ನ.14ಕ್ಕೆ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದು, ಸಾಂವಿಧಾನಿಕ ಹುದ್ದೆಯಲ್ಲಿರುವ ನನ್ನ ವಿರುದ್ಧ ಹಕ್ಕುಚ್ಯುತಿ ಮಂಡಿಸಿ, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.
ನನ್ನ ವಿರುದ್ಧ ಆಧಾರ ರಹಿತ, ಅರ್ಥಹೀನ ಮತ್ತು ಬೇಜವಾಬ್ದಾರಿ ಆರೋಪ ಮಾಡುವ ಮೂಲಕ ತನ್ನ ತೇಜೋವದೆ ಮಾಡಿದ್ದು, ವಿಧಾನಸಭೆ ಅರ್ಜಿಗಳ ಸಮಿತಿಗೂ ಅಗೌರವ ತೋರಿಸಿದ್ದಾರೆ. ಆರೋಗ್ಯಕರ ಸಮಾಜ ಹಾಳುವ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಕೃಷ್ಣಾರೆಡ್ಡಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
Next Story