ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವಿದ್ಯಾರ್ಥಿಯ ಕೊಲೆ
ಬೆಂಗಳೂರು, ನ.21: ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವಿದ್ಯಾರ್ಥಿಯನ್ನು ಕೊಲೆಗೈದಿರುವ ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನವರಂಗ್ ಬಳಿಯ ಎಂಇಎಸ್ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ಗಣೇಶ ಬ್ಲಾಕ್ನ ಉಮಾಮಹೇಶ್ವರ(20) ಕೊಲೆಯಾದ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕ್ರಿಕೆಟ್ ಆಟದ ವಿಚಾರವಾಗಿ ಜಗಳ ನಡೆದಾಗ ಸ್ನೇಹಿತನೊಬ್ಬನ ಕೆನ್ನೆಗೆ ಉಮಾಮಹೇಶ್ವರ ಬಾರಿಸಿದ್ದು, ಜೊತೆಯಲ್ಲಿದ್ದವರು ಜಗಳ ಬಿಡಿಸಿ ಬುದ್ಧಿ ಹೇಳಿ ಕಳುಸಿದ್ದರು. ಕೆನ್ನೆಗೆ ಬಾರಿಸಿಕೊಂಡ ಸ್ನೇಹಿತ ದ್ವೇಷದಿಂದ ಬುಧವಾರ ಸಂಜೆ ಮೂವರ ಗುಂಪು ಕಟ್ಟಿಕೊಂಡು ಬಂದು ಉಮಾಮಹೇಶ್ವರ ಮೇಲೆ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.
Next Story