ಮನುಷ್ಯನ ಸ್ವಾರ್ಥಕ್ಕಾಗಿ ಪರಿಸರ ಮಾಲಿನ್ಯ: ಪರಿಸರವಾದಿ ನಾಗೇಶ್ ಹೆಗ್ಡೆ
ಎಸ್ಐಒ ವತಿಯಿಂದ ಪರಿಸರ ಸಂರಕ್ಷಣಾ ಕಾರ್ಯಾಗಾರ
ಬೆಂಗಳೂರು, ನ.24: ದಿನದಿಂದ ದಿನಕ್ಕೆ ಮನುಷ್ಯನ ಸ್ವಾರ್ಥಕ್ಕಾಗಿ ಪರಿಸರ ದುಸ್ಥಿತಿಗೆ ತಲುಪಿತಿದೆ. ಇದು ಹೀಗೆಯೇ ಮುಂದುವರೆದರೆ ಕೆಲವೇ ವರ್ಷಗಳಲ್ಲಿ ಭೂಮಿಯಲ್ಲಿ ಬದುಕಲು ದುಸ್ತರವಗಲಿದೆ ಎಂದು ಹಿರಿಯ ಪರಿಸರವಾದಿ ನಾಗೇಶ್ ಹೆಗ್ಡೆ ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಪ್ ಇಂಡಿಯಾ(ಎಸ್ಐಒ) ವತಿಯಿಂದ ನಗರದಲ್ಲಿ ಹಮ್ಮಿಕೊಂಡ ಪರಿಸರ ಸಂರಕ್ಷಣಾ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಈಗಿನಿಂದಲೇ ಪ್ರತಿಯೊಬ್ಬ ವ್ಯಕ್ತಿಯು ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳದೆ ಅನ್ಯ ಮಾರ್ಗವಿಲ್ಲವೆಂದು ತಿಳಿಸಿದರು.
ಪರಿಸರವನ್ನು ಹಾಳು ಮಾಡುವಂತಹ ಕಾರ್ಯಗಳ ವಿರುದ್ಧ ಯುವಜನತೆ ಜಾಗೃತರಾಗಬೇಕು. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ವೈಯಕ್ತಿಕ ನೆಲೆಗಟ್ಟಿನಲ್ಲಿ ನಮ್ಮನ್ನು ನಾವು ಬದಲಾಯಿಸಿಕೊಂಡು, ಸಮಾಜದಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು. ನಾಗರಿಕರು ಜಾಗೃತರಾಗಿ ಸರಕಾರದ ಮೇಲೆ ಒತ್ತಡ ಹೇರಿ ಪರಿಸರಕ್ಕೆ ಪೂರಕವಾದ ನಿಯಮಗಳನ್ನು, ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಬೇಕು. ಸರಕಾರ ಮತ್ತು ಜನತೆ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆಂದು ಅವರು ಹೇಳಿದರು.
ಕಾರ್ಯಗಾರದಲ್ಲಿ ಎಸ್ಐಒ ವತಿಯಿಂದ ಪರಿಸರ ಸಂರಕ್ಷಣಾ ಸಂಬಂಧಿತ ಮಾರ್ಗದರ್ಶಿ ಸೂತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಎಸ್ಐಒ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು, ರಿಯಾಝ್ ಪಟೇಲ್, ರಾಜ್ಯ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.