ರಮೇಶ್ ಜಾರಕಿಹೊಳಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ...
ಬೆಂಗಳೂರು, ಡಿ. 6: ‘ಬಿಜೆಪಿ ಎನ್ನುವುದು ತಲೆಕೆಡಿಸುವ ಕಾರ್ಖಾನೆ’ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಜತೆ ಇರುವಾಗ ಸರಿಯಾಗಿದ್ದರು, ಈಗ ಅಲ್ಲಿದ್ದವರ ಹಾಗೆಯೇ ಆಗಿಬಿಟ್ಟಿದ್ದಾರೆ. ನಮ್ಮಿಂದ ಯಾರೂ ಬಿಜೆಪಿ ಸೇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
‘ರಮೇಶ್ ಜಾರಕಿಹೊಳಿ ಸಂಪೂರ್ಣ ಗುಣಮುಖರಾದ ನಂತರ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡುತ್ತೇವೆ’ ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
‘ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯಗಳು ನನ್ನ ಪಾಲಿಗೆ ಘೋಷಣೆ-ಭಾಷಣಗಳಲ್ಲ. ಅದು ನನ್ನ ಬದ್ಧತೆ. ಈ ಕಾರಣಕ್ಕಾಗಿಯೇ ನನ್ನನ್ನು ವಿರೋಧಿಸುವವರಿದ್ದಾರೆ. ಇಂತಹ ವರ್ಗ ಶತ್ರುಗಳನ್ನು ಜನಬಲದಿಂದ ಎದುರಿಸುತ್ತೇನೆ. ಬಾಬಾಸಾಹೇಬರೇ ಈ ಹೋರಾಟಕ್ಕೆ ಬೆಳಕು ಮತ್ತು ಶಕ್ತಿ. ಜ್ಞಾನ ಸೂರ್ಯನಿಗೆ ತಲೆಬಾಗುವೆ’
-ಸಿದ್ದರಾಮಯ್ಯ, ವಿಪಕ್ಷ ನಾಯಕ
Next Story