ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ: ಗೋವಿಂದ ಕಾರಜೋಳ
ಬೆಂಗಳೂರು, ಡಿ.10: ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವಕ್ಕೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ, ಹುಬ್ಬಳಿ- ಸೊಲ್ಲಾಪರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿದ್ದು, ಈ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಿದರೆ ಸುಗಮ ಸಂಚಾರ ಹಾಗೂ ಅಂತರ್ ರಾಜ್ಯ ಸಂಪರ್ಕಕ್ಕೆ ಅನುಕೂಲವಾಗುತ್ತದೆ. ಈ ಮಾರ್ಗವು ಪ್ರಮುಖ ಮಾರ್ಗವಾಗಿದ್ದು, ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವ ಪ್ರಾಮುಖ್ಯತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.