ಬಿಎಸ್ವೈಯನ್ನು ಭೇಟಿಯಾದ ಎಂಟಿಬಿ ನಾಗರಾಜ್: ಬಚ್ಚೇಗೌಡ ವಿರುದ್ಧ ದೂರು
ಫೈಲ್ ಚಿತ್ರ
ಬೆಂಗಳೂರು, ಡಿ.10: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿರುವ ಮಾಜಿ ಶಾಸಕ ಎಂಟಿಬಿ ನಾಗರಾಜ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮಂಗಳವಾರ ಬೆಳಗ್ಗೆ ನಗರದ ಡಾಲರ್ಸ್ ಕಾಲನಿಯಲ್ಲಿರುವ ಮುಖ್ಯಮಂತ್ರಿಯ ನಿವಾಸಕ್ಕೆ ಭೇಟಿ ನೀಡಿದ ಎಂಟಿಬಿ ನಾಗರಾಜ್, ಹೊಸಕೋಟೆ ಕ್ಷೇತ್ರದಲ್ಲಿನ ಸೋಲಿನಿಂದ ತೀವ್ರ ಬೇಸರಗೊಂಡಿದ್ದು, ತನ್ನ ಸೋಲಿಗೆ ಕಾರಣವಾದ ಅಂಶಗಳನ್ನು ಯಡಿಯೂರಪ್ಪಗೆ ವಿವರಿಸಿದರು.
ಬಿಜೆಪಿ ಚಿಹ್ನೆಯಿಂದ ಗೆದ್ದು ಸಂಸದರಾಗಿರುವ ಬಿ.ಎನ್.ಬಚ್ಚೇಗೌಡ, ಚುನಾವಣೆಯಲ್ಲಿ ತನ್ನ ಪರವಾಗಿ ಪ್ರಚಾರಕ್ಕೆ ಬಾರದೆ, ನನ್ನ ವಿರುದ್ಧ ಬಂಡಾಯವಾಗಿ ಕಣಕ್ಕಿಳಿದಿದ್ದ ತಮ್ಮ ಪುತ್ರನ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಮುಖಂಡರ ಸಭೆ ಕರೆದು ಸೂಚನೆಗಳನ್ನು ನೀಡಿದ್ದಾರೆ ಎಂದು ಬಚ್ಚೇಗೌಡ ವಿರುದ್ಧ ಎಂಟಿಬಿ ನಾಗರಾಜ್ ದೂರು ನೀಡಿದರು.
Next Story