ಡಿ.22ರ ನಂತರ ಸಂಪುಟ ಪುನಾರಚನೆ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಡಿ. 13: ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರಿಗೆ ಚುನಾವಣೆಗೆ ಮೊದಲು ನೀಡಿದ ಆಶ್ವಾಸನೆಯಂತೆ ಸಚಿವ ಸ್ಥಾನ ನೀಡಲಾಗುವುದು. ವರಿಷ್ಠರೊಂದಿಗೆ ಚರ್ಚಿಸಿ ಡಿ.22ರ ನಂತರ ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜಾರ್ಖಂಡ್ ಚುನಾವಣೆ ಪ್ರಚಾರ ಕಾರ್ಯದಲ್ಲಿರುವ ಕಾರಣ ಅವರ ಭೇಟಿ ಸಾಧ್ಯವಾಗಿಲ್ಲ.
ಇನ್ನು ಒಂದು ವಾರದ ನಂತರ ನಾನು ಹೊಸದಿಲ್ಲಿಗೆ ತೆರಳಲಿದ್ದು, ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ಬಗ್ಗೆ ಅವರೊಂದಿಗೆ ಚರ್ಚಿಸಿ ಡಿ.20 ಅಥವಾ 22ರ ನಂತರ ಸಂಪುಟ ಪುನಾರಚನೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದರು.
Next Story