ಕಬ್ಬಿಣದ ಶೀಟ್ ಬಿದ್ದು ಕಾರ್ಮಿಕರಿಗೆ ಗಾಯ
ಬೆಂಗಳೂರು, ಮೇ 17: ಸಿಮೆಂಟ್ ಕಾಂಕ್ರಿಟ್ ಹಾಕಲು ಅಳವಡಿಸುತ್ತಿದ್ದ ಕಬ್ಬಿಣದ ಶೀಟ್ಗಳು ಬಿದ್ದು ಇಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಶಾಸಕರ ಭವನದಲ್ಲಿ ಮಂಗಳವಾರ ಸಂಭವಿಸಿದೆ.
ಗಾಯಗೊಂಡಿರುವ ಕಾರ್ಮಿಕರನ್ನು ರಾಜು ಹಾಗೂ ಸಮೀರ್ ಎಂದು ಗುರುತಿಸಲಾಗಿದ್ದು, ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story