ಸಿದ್ದರಾಮಯ್ಯಗೆ ಹೈಕಮಾಂಡ್ ಆಹ್ವಾನ: ಕೆಪಿಸಿಸಿ ಅಧ್ಯಕ್ಷರ ನೇಮಕ ಚರ್ಚೆ ?
ಬೆಂಗಳೂರು, ಜ.12: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಸದಿಲ್ಲಿಗೆ ಆಹ್ವಾನಿಸಿದ್ದು, ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಹೈಕಮಾಂಡ್ ಆಹ್ವಾನದ ಹಿನ್ನೆಲೆ ಸೋಮವಾರ(ಜ.13) ಸಂಜೆ ಸಿದ್ದರಾಮಯ್ಯ ಅವರು ಹೊಸದಿಲ್ಲಿಗೆ ತೆರಳಲಿದ್ದು, ಮಂಗಳವಾರ(ಜ.14) ರಾತ್ರಿ ಬೆಂಗಳೂರಿಗೆ ವಾಪಸ್ಸು ಆಗಲಿದ್ದಾರೆ ಎಂದು ಅವರ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿರುವ ರಾಜೀನಾಮೆ ವಿಚಾರದಲ್ಲೂ ವರಿಷ್ಠರು ಸಮಾಲೋಚನೆ ನಡೆಸಲಿದ್ದು, ಶೀಘ್ರದಲ್ಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನದ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
Next Story