ಮನೆಯ ಮುಂಭಾಗ ನಿಲ್ಲಿಸಿದ್ದ ಸ್ಕೂಟರ್ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.13: ಕ್ಷುಲ್ಲಕ ಕಾರಣಕ್ಕೆ ಮನೆಯ ಮುಂಭಾಗ ನಿಲ್ಲಿಸಿದ್ದ ಸ್ಕೂಟರ್ಗೆ ಬೆಂಕಿ ಇಟ್ಟು ಮನೆಗೆ ಹಾನಿ ಮಾಡಿರುವ ಘಟನೆ ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿನ ದಾಸರಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಅವರ ಮನೆಯ ಮುಂಭಾಗ ನಿಲ್ಲಿಸಿದ್ದ ಸ್ಕೂಟರ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿ ಕಿಟಕಿ ಗೋಡೆಗೆ ಹಾನಿಯಾಗಿದೆ ಎನ್ನಲಾಗಿದೆ.
ಸ್ಥಳೀಯರೇ ಬೆಂಕಿ ನಂದಿಸಿದ್ದು, ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಯುವತಿಯೊಬ್ಬಳ ವಿಚಾರವಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಾಗಲಗುಂಟೆ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು.
Next Story