ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರಿಗೆ ಹಸ್ತಾಂತರ
ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ
ಬೆಂಗಳೂರು, ಜ.22: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕವನ್ನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳಗ್ಗೆ ಪೊಲೀಸರಿಗೆ ಶರಣಾಗಿದ್ದ ಉಡುಪಿ ಮೂಲದ ಆರೋಪಿ ಆದಿತ್ಯ ರಾವ್ನನ್ನು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಇಂದು ಬೆಳಗ್ಗೆ ಡಿಜಿಪಿ-ಐಜಿಪಿ ನೀಲಮಣಿ ಎನ್. ರಾಜು ಅವರ ಎದುರು ಶರಣಾಗಿದ್ದ ಆರೋಪಿಯನ್ನು ಹಲಸೂರು ಗೇಟ್ ಪೊಲೀಸ್ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯ ಬಳಿಕ ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಮಂಗಳೂರಿನಿಂದ ಆಗಮಿಸಿದ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ಪೊಲೀಸ್ ತಂಡ ಆರೋಪಿ ಆದಿತ್ಯ ರಾವ್ನನ್ನು ವಶಕ್ಕೆ ಪಡೆದಿದ್ದು, ಮಂಗಳೂರಿಗೆ ಕರೆತರಲಿದ್ದಾರೆ.
Next Story