ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ನೂತನ ಶಾಖೆ ಘೋಷಣೆ
ಬೆಂಗಳೂರು, ಜ.24: ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್(ರಿ) ನ ರಾಜ್ಯ ಸಮಿತಿಯಿಂದ ಬೆಂಗಳೂರು ಪೂರ್ವ ತಾಲೂಕಿನ ನೂತನ ಶಾಖೆಯನ್ನು ರಾಜ್ಯಾಧ್ಯಕ್ಷ ರವೀಂದ್ರನಾಥ ಸಿ.ಎನ್. ಶುಕ್ರವಾರ ಘೋಷಿಸಿದ್ದಾರೆ.
ಬೆಂಗಳೂರು ಪೂರ್ವ ತಾಲೂಕಿನ ಅಧ್ಯಕ್ಷರಾಗಿ ಸಂಜೀವ, ಉಪಾಧ್ಯಕ್ಷರಾಗಿ ಅಮ್ಜದ್ ಖಾನ್ ಎಂ., ಎನ್.ರವಿ, ಪ್ರಧಾನ ಕಾರ್ಯದರ್ಶಿಗಳಾಗಿ ರಾಮಾಂಜಿನಪ್ಪ ಆರ್., ಮುರುಳಿ, ಕಾರ್ಯದರ್ಶಿ ಧರ್ಮರಾಜ್, ಜಂಟಿ ಕಾರ್ಯದರ್ಶಿ ಜೈಪಾಲ್ ನಾಯ್ಡು, ಪರಿಸರ ಮಂಜುನಾಥ್ ಕೆ., ಸಂಘಟನಾ ಕಾರ್ಯದರ್ಶಿ ಶಿವಪ್ಪ, ಖಜಾಂಚಿ ಗಿರೀಶ್ ಕೆ.ಆರ್. ಇವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸ್ವಾಮಿ ನಕಿರಕಂಟಿ, ಕಾರ್ಯದರ್ಶಿ ಸುರೇಶ್ ಮತ್ತಿತರರು ಇದ್ದರು.
Next Story