ಹೊಸದಿಲ್ಲಿ ತುಘಲಕ್ ಪೊಲೀಸ್ ಠಾಣೆಗೆ ಡಿ.ಕೆ ಶಿವಕುಮಾರ್ ಭೇಟಿ
ಬೆಂಗಳೂರು, ಜ. 26: ಹೊಸದಿಲ್ಲಿಯ ತುಘಲಕ್ ಪೊಲೀಸ್ ಠಾಣೆಗೆ ಖುದ್ದು ಭೇಟಿ ನೀಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಲ್ಲಿನ ಪಿಎಸ್ಸೈ ಗೋವಿಂದ್ ಚೌವ್ಹಾಣ್ ಮತ್ತು ಸುನೀಲ್ ಕುಮಾರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ರವಿವಾರ ಠಾಣೆಗೆ ಭೇಟಿ ನೀಡಿದ ಶಿವಕುಮಾರ್, ಆದಾಯ ತೆರಿಗೆ ಇಲಾಖೆ (ಐಟಿ) ವಿಚಾರಣೆ ವೇಳೆ 13 ದಿನಗಳ ಕಾಲ ತುಘಲಕ್ ಪೊಲೀಸ್ ಠಾಣೆಯಲ್ಲಿದ್ದ ಸಂದರ್ಭದಲ್ಲಿ ಇಬ್ಬರು ಅಧಿಕಾರಿಗಳು ನನಗೆ ನೈತಿಕ ಬೆಂಬಲ ನೀಡಿದ್ದರು. ಹೀಗಾಗಿ ಅವರಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
Next Story