ಸಂಪುಟ ವಿಸ್ತರಣೆಗೆ ಯಡಿಯೂರಪ್ಪ ಉತ್ಸುಕ: ಸಚಿವ ಆರ್.ಅಶೋಕ್
ಬೆಂಗಳೂರು, ಜ. 29: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಉತ್ಸುಕರಾಗಿದ್ದು, ಶೀಘ್ರದಲ್ಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಂಬಂಧ ನಾಳೆ ಸಿಎಂ ದಿಲ್ಲಿಗೆ ತೆರಳುವ ಸಾಧ್ಯತೆಗಳಿವೆ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯೂ ಇಲ್ಲ. ಈ ಸಂಬಂಧ ಅವರಿಗೆ ನೀವು ಕೇಳಬೇಕು ಎಂದರು.
ಸಂಪುಟ ವಿಸ್ತರಣೆ ಸಂಬಂಧ ಯಾರೂ ಮಾತನಾಡಬಾರದು ಎಂದು ಯಾರೂ ಹೇಳಿಲ್ಲ. ಈಗಾಗಲೇ ವಿಸ್ತರಣೆ ಕುರಿತು ನಾನೇ ಖುದ್ದು ಹಲವು ಬಾರಿ ಹೇಳಿಕೆ ನೀಡಿದ್ದೇನೆ. ಆದಷ್ಟು ಶೀಘ್ರವೇ ಸಂಪುಟ ನಿಶ್ಚಿತವಾಗಿಯೂ ವಿಸ್ತರಣೆಯಾಗಲಿದ್ದು, ಸಿಎಂ ಕೊಟ್ಟ ಮಾತು ಉಳಿಸಿಕೊಳ್ಳಲಿದ್ದಾರೆ ಎಂದರು.
Next Story