ಅಪರಾಧ ನಿಯಂತ್ರಣಕ್ಕೆ 'ಟಿಕ್ಟಾಕ್': ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಬೆಂಗಳೂರು, ಫೆ.7: ಅಪರಾಧ ನಿಯಂತ್ರಣ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಟಿಕ್ಟಾಕ್ ಖಾತೆ ತೆರೆದಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಈ ಕುರಿತು ಫೋಸ್ಟ್ ಮಾಡಿರುವ ಅವರು, ನಗರ ಪೊಲೀಸ್ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳ ಸಣ್ಣ ವಿಡಿಯೋಗಳನ್ನು ಟಿಕ್ಟಾಕ್ನಲ್ಲಿ ಅಪ್ಲೋಡ್ ಮಾಡಿ, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ನಾಗರಿಕ ಕೇಂದ್ರಿತ ಹೊಸ ಯುಗದ ವಿಷಯಗಳನ್ನು ಟಿಕ್ಟಾಕ್ನಲ್ಲಿ ಹಂಚಿಕೊಳ್ಳಲಾಗುವುದು ಎಂದು ಬರೆದುಕೊಂಡಿದ್ದಾರೆ
ಈಗಾಗಲೇ ಕೇರಳ, ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೊಲೀಸ್ ಕಮೀಷನರೇಟ್ಗಳಲ್ಲಿ ಟಿಕ್ಟಾಕ್ನ್ನು ಬಳಸಿಕೊಳ್ಳಲಾಗುತ್ತಿದೆ ಸಾಮಾಜಿಕ ಜಾಲತಾಣಗಳ ವೇದಿಕೆಯನ್ನು ಬಳಸಿಕೊಂಡು ಸಾರ್ವಜನಿಕ ಅರಿವು ಮೂಡಿಸಲು ಟಿಕ್ಟಾಕ್ನ್ನು ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Next Story