ಮದ್ಯದ ಅಮಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು, ಫೆ.12: ಇಲ್ಲಿನ ಶ್ರೀರಾಮಪುರ ಸಮೀಪದ ದಯಾನಂದ ನಗರದ ನಿವಾಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮದ್ಯ ಸೇವನೆ ಮಾಡುತ್ತಿದ್ದ ಜನಾರ್ಧನ್ ಸಿಂಗ್(47), ಕೆಲಸಕ್ಕೆ ಹೋಗದೆ ಸುತ್ತಾಡುತ್ತಿದ್ದು, ರಾತ್ರಿ ಮದ್ಯದ ಅಮಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಶ್ರೀರಾಮಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story