ಸಿಎಂ ಪರಿಹಾರ ನಿಧಿಗೆ ಒಂದು ಕೋಟಿ ರೂ. ನೀಡಿದ ಬೆಂಗಳೂರು ಜಲಮಂಡಳಿ
ಬೆಂಗಳೂರು, ಫೆ.14: ಬೆಂಗಳೂರು ಜಲಮಂಡಳಿ ವತಿಯಿಂದ ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಮತ್ತಷ್ಟು ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಮೊದಲ ಹಂತವಾಗಿ 2019-20ನೇ ಸಾಲಿನಲ್ಲಿ 1 ಕೋಟಿ ರೂ. ಮತ್ತು ನೌಕರರ ಸಂಘದ ವತಿಯಿಂದ ಎಲ್ಲಾ ಅಧಿಕಾರಿ, ನೌಕರರ ಒಂದು ದಿನದ ವೇತನ 71,39,209 ರೂ.ವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿತ್ತು. ಈಗ ಪ್ರವಾಹ ಸಂತ್ರಸ್ತರಿಗೆ ಮತ್ತಷ್ಟು ನೆರವಾಗುವ ದೃಷ್ಟಿಯಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಬಾರಿಗೆ 2019-20 ಸಾಲಿನಲ್ಲಿ 1ಕೋಟಿ ರೂ.ಮೊತ್ತವನ್ನು ಡಿ.ಡಿ. ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು, ಹಿರಿಯ ಅಧಿಕಾರಿಗಳಾದ ತುಷಾರ್ ಗಿರಿನಾಥ್, ಕೆಂಪರಾಮಯ್ಯ, ಪ್ರಶಾಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Next Story