ಬೆಂಗಳೂರು: ಗೋಡೆ ಮೇಲೆ 'ಫ್ರೀ ಕಾಶ್ಮೀರ್' ಬರಹ
ಪ್ರಕರಣ ದಾಖಲು
ಬೆಂಗಳೂರು, ಮಾ.2: ಶಿವಾಜಿನಗರದ ಸಂದೀಪ್ ಉನ್ನಿಕೃಷ್ಣನ್ ಎನ್ಕ್ಲೇವ್ ಬಳಿಯ ಗೋಡೆ ಮೇಲೆ ‘ಫ್ರೀ ಕಾಶ್ಮೀರ್’ ಹಾಗೂ ಮೋದಿ ರಾಜೀನಾಮೆ ನೀಡಬೇಕು ಎಂಬ ಬರಹಗಳು ಕಂಡುಬಂದಿವೆ.
ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ಷೇಪಾರ್ಹ ಬರಹ ಬರೆದಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸೋಮವಾರ ಬೆಳಗ್ಗೆ ಈ ಘಟನೆ ನಮ್ಮ ಗಮನಕ್ಕೆ ಬಂದಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಆಕ್ಷೇಪಾರ್ಹ ಬರಹಗಳನ್ನು ಬರೆದವರ ಬಗ್ಗೆ ಪತ್ತೆ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.
Next Story