ಕನ್ನಡ ಚಿತ್ರನಟನ ಹತ್ಯೆ ಪ್ರಕರಣ: ಆರೋಪಿ ಚಿತ್ರ ನಿರ್ಮಾಪಕನಿಗೆ ಜೀವಾವಧಿ ಶಿಕ್ಷೆ
ರಾಜ್ಯ ಹೈಕೋರ್ಟ್ ತೀರ್ಪು
ವಿನೋದ್ ಕುಮಾರ್
ಬೆಂಗಳೂರು, ಮಾ.20: ಚಿತ್ರನಟ ವಿನೋದ್ ಕುಮಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ಮಾಪಕ ಗೋವರ್ಧನ ಮೂರ್ತಿ ಅವರಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಗೋವರ್ಧನ ಮೂರ್ತಿ ಗೆ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತು.
ವಿನೋದ್ ಕುಮಾರ್ ಅವರನ್ನು 2008ರಲ್ಲಿ ಬೆಂಗಳೂರಿನ ಹೊರವಲಯದ ಬಾಗಲೂರಿನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಗೋವರ್ಧನ ಮೂರ್ತಿ ಸೇರಿದಂತೆ ಒಟ್ಟು ಏಳು ಜನರನ್ನು ಖುಲಾಸೆಗೊಳಿಸಿ 2012ರ ಡಿಸೆಂಬರ್ನಲ್ಲಿ ಆದೇಶಿಸಿತ್ತು. ರಾಜ್ಯ ಸರಕಾರವು ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು.
Next Story