ಮಂಗಳಮುಖಿ ಕೊಲೆ ಪ್ರಕರಣ: 48 ಗಂಟೆಯೊಳಗೆ ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ.20: ಮಂಗಳಮುಖಿ ಕೊಲೆ ಆರೋಪ ಪ್ರಕರಣ ಸಂಬಂಧ ಆರೋಪಿಗಳನ್ನು ಇಲ್ಲಿನ ಸುಬ್ರಮಣ್ಯ ಠಾಣಾ ಪೊಲೀಸರು, 48 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಸುಬ್ರಮಣ್ಯಪುರದ ಅರುಣ್ ಕುಮಾರ್ ಹಾಗೂ ಶ್ರೀನಾಥ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ಮದ್ಯ ಸೇವನೆಯ ಅಮಲಿನಲ್ಲಿ, ಮಂಗಳಮುಖಿ ಜಯಾ ಎಂಬಾಕೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ಮೃತದೇಹವನ್ನು ಕುಮಾರಸ್ವಾಮಿ ಲೇಔಟ್ ಬಳಿ ಆಟೋದಲ್ಲಿಯೇ ಬಿಟ್ಟು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಸುಬ್ರಮಣ್ಯಪುರ ಠಾಣಾ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಣಕಾಸಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ನಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರಿಂದ ಹರಿತವಾದ ಆಯುಧಗಳಿಂದ ಇರಿದು ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story