ರಾಜ್ಯದಲ್ಲಿ ಮತ್ತೊಬ್ಬನಲ್ಲಿ ಕೊರೋನ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ
ಬೆಂಗಳೂರು, ಮಾ.23: ರಾಜ್ಯದಲ್ಲಿ ಮತ್ತೋರ್ವನಲ್ಲಿ ಕೊರೋನ ವೈರಸ್ ಸೋಂಕು ದೃಢಪಟಿಟ್ಟದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರೊಂದಿಗೆ ಕೊರೋನ ಪೀಡಿತರ ಒಟ್ಟು ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಈ ವೈರಸ್ ಸೋಂಕು ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್, ಪಿಪಿಇ ಕಿಟ್ 5 ಲಕ್ಷ, ಲೇಕ್-3 ಮಾಸ್ಕ್ 15 ಲಕ್ಷ ಖರೀದಿಗೆ ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
Next Story