ಮನೆ ಖಾಲಿ ಮಾಡಿಸಲು ಸುಳ್ಳು ಸುದ್ದಿ: ಬಿಬಿಎಂಪಿ ಸದಸ್ಯೆಯ ಪತಿ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು, ಮಾ.31: ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬನಿಗೆ ಕೊರೋನ ಸೋಂಕಿದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪದಡಿ ಬಿಬಿಎಂಪಿಯ ಚೌಡೇಶ್ವರಿ ವಾರ್ಡ್-2ರ ಕಾರ್ಪೊರೇಟರ್ ಅವರ ಪತಿ ಅಮರನಾಥ್ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ವ್ಯಕ್ತಿಯೊಬ್ಬರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಈತನಿಗೆ ಕೊರೋನ ಸೋಂಕು ತಗುಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು ಎನ್ನಲಾಗಿದೆ.
ಈ ವದಂತಿಯಿಂದಾಗಿ ಆಂಧ್ರ-ತೆಲಂಗಾಣದ ಕೂಲಿ ಕಾರ್ಮಿಕರು ಭಯಭೀತರಾಗಿ ಗಾಬರಿಯಿಂದ ಮನೆಬಿಟ್ಟು ಊರಿಗೆ ಹೋಗಲು ತಂಡೋಪತಂಡವಾಗಿ ಯಲಹಂಕದ ಕೋಗಿಲು ಕ್ರಾಸ್ ಬಸ್ ನಿಲ್ದಾಣಕ್ಕೆ ಬಂದಿರುವುದನ್ನು ಕಂಡ ಪೊಲೀಸರು ಜನತೆಗೆ ವಿಚಾರಿಸಿದಾಗ ಅಮರ್ ನಾಥನ ಸುಳ್ಳು ವದಂತಿ ಬಯಲಿಗೆ ಬಂದಿದೆ.
ಈ ಸಂಬಂಧ ಕೊರೋನ ಸೋಂಕಿನ ಬಗ್ಗೆ ಸುಳ್ಳು ವದಂತಿ ಹರಡಿಸಿರುವ ಅಮರ್ ನಾಥ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story